ಬಸವಣ್ಣ ವಚನ ೪

ಸಂಸಾರಸಾಗರದ ತೆರೆ ಕೊಬ್ಬಿ ಮುಖದ ಮೇಲೆ ಅಲೆವುತ್ತಿದೆ ನೋಡಾ! ಸಂಸಾರಸಾಗರ ಉರದುದ್ದವೇ ಹೇಳಾ ? ಸಂಸಾರಸಾಗರ ಕೊರಲುದ್ದವೇ ಹೇಳಾ ? ಸಂಸಾರಸಾಗರ ಶಿರದುದ್ದವಾದ ಬಳಿಕ ಏನ ಹೇಳುವೆನಯ್ಯ ? ಅಯ್ಯ; ಅಯ್ಯ, ಎನ್ನ ಹುಯ್ಯಲ ಕೇಳಯ್ಯ! ಕೂಡಲಸಂಗಮದೇವ, ನಾನೇವೆನೇವೆನಯ್ಯ!