ಬಸವಣ್ಣ ವಚನ ೮

ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ, ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ, ಕೂಟಕ್ಕೆ ಸ್ತ್ರಿಯಾಗಿ ಕೂಡಿದಳು ಮಾಯೆ, ಇದಾವಾವ ಪರಿಯಲ್ಲು ಕಾಡಿತ್ತು ಮಾಯೆ. ಈ ಮಾಯೆಯ ಕಳೆವಡೆ ಎನ್ನಳವಲ್ಲ ನೀವೇ ಬಲ್ಲಿರಿ ಕೂಡಲಸಂಗಮದೇವ.