ಬಸವಣ್ಣ ವಚನ ೬

ನಾನೊಂದ ನೆನೆದರೆ, ತಾನೊಂದ ನೆನೆವುದು; ನಾನಿತ್ತಲೆಳೆದರೆ, ತಾನತ್ತಲೆಳೆವುದು; ತಾ ಬೇರೆ ಎನ್ನನಳಲಿಸಿ ಕಾಡಿತ್ತು; ತಾ ಬೇರೆ ಎನ್ನ ಬಳಲಿಸಿ ಕಾಡಿತ್ತು; ಕೂಡಲಸಂಗನ ಕೂಡಿಹೆನೆಂದರೆ ತಾನೆನ್ನ ಮುಂದುಗೆಡಿಸಿತ್ತು ಮಾಯೆ.